

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠ ಇವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ನಾಡಿನ ವಿವಿಧ ಸಂತರುಗಳಿಂದ ಲೋಕಕಲ್ಯಾಣಾರ್ಥ ಶ್ರೀ ಆತ್ಮಲಿಂಗ ಪೂಜೆ ಹಾಗು ಸಂತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ “ಗೋಕರ್ಣ ಗೌರವ” ಇಂದು 09-01-2017 ಸೋಮವಾರ ಶುಭಾರಂಭಗೊಂಡಿತು. ಶ್ರೀಮದ್ ಗಿರಿರಾಜಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ|| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು. ಸೂರ್ಯಸಿಂಹಾಸನ ಮಠಾಧೀಶ . ಶ್ರೀಶೈಲ ಆಂಧ್ರಪ್ರದೇಶ ಇವರಿಂದ ಕಾರ್ಯಕ್ರಮ ಶುಭಾರಂಭಗೊಂಡಿತು. ಪ್ರಧಾನ ಅರ್ಚಕ ವೇ ಶಿತಿಕಂಠ ಹಿರೇ ಭಟ್ ಹಾಗೂ ಉಪಾಧಿವಂತ ಮಂಡಳಿಯ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಫಲ ಸಮರ್ಪಿಸಿದರು.