

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಶ್ರಾವಣ ಸೋಮವಾರ ದಿನ (29-08-2016) ಶ್ರೀ ಶ್ರೀ ರವಿಶಂಕರ್ ಗುರೂಜಿ ಪ್ರದೋಷ ಕಾಲದಲ್ಲಿ ಭೇಟಿ ನೀಡಿ, ಪೂಜೆ ಸಲ್ಲಿಸಿದರು . ವೇ ಶಿತಿಕಂಠ ಹಿರೇ ಭಟ್ ಇವರ ನೇತೃತ್ವದಲ್ಲಿ ಉಪಾಧಿವಂತ ಮಂಡಳಿಯ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಫಲ ಸಮರ್ಪಿಸಿದರು . ಪೂಜಾ ವ್ಯವಸ್ಥೆಯ ಕುರಿತು ಗುರೂಜಿ ಸಂತಸ ವ್ಯಕ್ತಪಡಿಸಿದರು .