

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶಾಸ್ತ್ರೀಯ,ರೂಢಿಗತ ಪರಂಪರೆಯಂತೆ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಜಯ ಸಂವತ್ಸರದ ಎಡೆ ಅಮಾವಾಸ್ಯೆ ಉತ್ಸವ (ರಂಗ ಪೂಜೆ) ದಿನಾಂಕ 22-11-2014 ಶನಿವಾರ ರಾತ್ರಿ ಸಂಪನ್ನಗೊಂಡಿತು . ಅರ್ಚಕರಾದ ವೇ. ಸಾಂಬ ಭಟ್ ಷಡಕ್ಷರಿ ಪೂಜೆ ನೆರವೇರಿಸಿದರು . 108 ಎಡೆ(ಬಾಳೆಎಲೆ)ಗಳಲ್ಲಿ ದೋಸೆ , ಇಡ್ಲಿ, ಸುಕ್ಕಿನುಂಡೆ, ವಡೆ, ಪಾಯಸ, ತೊವೆ, ಕಬ್ಬು, ಎಲೆ, ಹಣ್ಣಡಿಕೆ ಇವುಗಳನ್ನು ದೇವರಿಗೆ ನೈವೇದ್ಯ ಮಾಡಿ ,ಆನಂತರ ಮಹಾಪೂಜೆ,ಭೂತಬಲಿ,ರಥೋತ್ಸವ ಜರುಗಿತು .