

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಭಗವಾನ್ ಸದ್ಗುರು ಶ್ರೀ ಶ್ರೀ ಶ್ರೀಧರ ಸ್ವಾಮಿಗಳವರ ದಿವ್ಯ ಪಾದುಕೆಗಳು ಇಂದು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಚಿತ್ತೈಸಿದ್ದವು . ಶ್ರೀ ದೇವಾಲಯದ ಆವಾರದಲ್ಲಿ ಶ್ರೀ ಗುರು ಪಾದುಕಾ ಪೂಜೆ ನೆರವೇರಿಸಲಾಯಿತು . ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಶ್ರೀ ಜಿ ಕೆ ಹೆಗಡೆ ದಂಪತಿಗಳು ಪೂಜೆ ಸಲ್ಲಿಸಿದರು .