As per the holy directions of Sri Sri Raghaveshwara Bharathi Mahaswamiji, Shree RamachandrapuraMatha, ‘RangaPooja’ celebration performed at Samsthana Sri Mahabaleshwara Temple, Gokarna on the day of Karthika Amavasya.
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು , ಶ್ರೀರಾಮಚಂದ್ರಾಪುರಮಠ, ಇವರ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 26-11-2019 ಮಂಗಳವಾರ ಕಾರ್ತೀಕ ಅಮಾವಾಸ್ಯೆಯಂದು ವಿಕಾರಿ ಸಂವತ್ಸರದ #ರಂಗಪೂಜೆ (ಎಡೆ ಅಮಾವಾಸ್ಯೆ) ಉತ್ಸವ ಸಂಪನ್ನಗೊಂಡಿತು . ವೇ ಗಣಪ ಉಪಾಧ್ಯ ಇವರು ಪೂಜಾ ಕೈಂಕರ್ಯ ನೆರವೇರಿಸಿದರು . ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು . ಶ್ರೀದೇವರಿಗೆ 108 ಎಡೆ ವಿಶೇಷ ಭಕ್ಷ್ಯ ನೈವೇದ್ಯ ಸಲ್ಲಿಸಲಾಯಿತು. ಪೂಜೆಯ ನಂತರ ಶ್ರೀ ದೇವಾಲಯದಲ್ಲಿ ಸೇವೆ ಸಲ್ಲಿಸುವ ವಿವಿಧ ಸಮಾಜದ ಕಾರ್ಯಕರ್ತರಿಗೆ ಎಡೆ ಪ್ರಸಾದವನ್ನು ವಿತರಿಸಲಾಯಿತು .